Breaking News
Home / ಬೆಳಗಾವಿ / ಹಳ್ಳೂರದಿಂದ ಶಿವಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೋಳಿ

ಹಳ್ಳೂರದಿಂದ ಶಿವಾಪೂರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೋಳಿ

Spread the love

 ಮೂಡಲಾಗಿ: ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಬಾಂವಿ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಸತತ ಪ್ರಯತ್ನದಿಂದ ರಸ್ತೆಯನ್ನು ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತೆಂದು ಹೇಳಿದರು.

ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಲೆಕ್ಕ ಶೀರ್ಷಿಕೆ 5054 ಜಿಲ್ಲಾ ಮುಖ್ಯ ನವೀಕರಣ ಅನುದಾನದಡಯಲ್ಲಿ 1 ಒಂದು ಕೋಟಿ ಹಣದಲ್ಲಿ 2. 3 ಕೀ ಮೀ ಮರು ಡಾಂಬರೀಕರಣ ರಸ್ತೆ ಕಾಮಗಾರಿ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ರೈತರಿಗೆ ಸಾರ್ವಜನಿಕರಿಗೆ , ಹಾಗೂ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದರಿಂದ ರಸ್ತೆ ಸಂಚರಿಸಲು ಅನುಕೂಲವಾಗಲು ರಸ್ತೆ ಅಭಿವೃದ್ದಿ ಕಾರ್ಯ ಮಾಡಲಾಗಿದೆ. ರಸ್ತೆಯನ್ನು ಕಳಪೆ ಕಾಮಗಾರಿಯಾಗದೆ ಗುಣಮಟ್ಟದ ರಸ್ತೆ ನಿರ್ಮಿಸಬೆಕು .ಗ್ರಾಮದ ಅಭಿವೃದ್ಧಿಗೆ ನಾವು ನೀವೂ ಆದ್ಯತೆ ನೀಡಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಕಾರ್ಯ ಮಾಡಿ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಣ್ಣತಿಕರಿಸಿದ ಪ್ರೌಡ ಶಾಲೆಗೆ ಬೆಟ್ಟಿ ನೀಡಿ ವೀಕ್ಷಣೆ ಮಾಡಿದರು. ನಂತರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ ,ಶೂ, ಸಮವಸ್ತ್ರ ವಿತರಣೆ ಮಾಡಿದರು.

ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನೀಲವ್ವ ಹೊಸಟ್ಟಿ. ಶಾಸಕರ ಆಪ್ತ ಸಹಾಯಕರಾದ ಮಲ್ಲಿಕಾರ್ಜುನ ಯಕ್ಸಂಬಿ. ಅಬ್ದುಲ ಮಿರ್ಜಾನಾಯ್ಕ. ಹನಮಂತ ತೆರದಾಳ ಮಾದೇವ ಹೊಸಟ್ಟಿ. ಲಕ್ಷ್ಮಣ ಕತ್ತಿ.ಕುಮಾರ ಲೋಕನ್ನವರ. ಗಜಾನನ ಮಿರ್ಜಿ. ಬಸವರಾಜ್ ಲೋಕನ್ನವರ. ಮುರಿಗೆಪ್ಪ ಮಾಲಗಾರ. ಬಸಪ್ಪ ಸಂತಿ. ಸಿದ್ದಣ್ಣ ದುರದುಂಡಿ.ಶಿವಪ್ಪ ಅಟ್ಟಮಟ್ಟಿ.ಶಂಕರ ಬೋಳನ್ನವರ.ಕೆಂಪಣ್ಣ ಅಂಗಡಿ.ಪರಮಾನಂದ ಶೇಡಬಾಳಕರ. ಎಂಜಿನಿಯರ್ ಅವತಾಡೆ.ಗುತ್ತಿಗೆದಾರ ವಿಶ್ವನಾಥ ನೇಮಗೌಡರ. ಶಿವಾನಂದ ಸಂಪಗಾರ.ಎಸ್ ಬಿ ಹಳಿಗೌಡರ. ಎಸ್ ಎಂ ಬೆಳ್ಳಕ್ಕಿ. ಅಸ್ಲಾಂ ಮಕಾಂದಾರ. ಎಸ್ ಡಿ ನಾವಿ. ಲಕ್ಷ್ಮಣ ಮರಿಚಂಡಿ ಹಾಗೂ ಶಾಲೆಯ ಗುರುಗಳು ಹಾಗೂ ಗುರುಮಾತೆಯರು ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು.


Spread the love

About inmudalgi

Check Also

ಶೈಕ್ಷಣಿಕ ಅಭಿವೃದ್ಧಿಗೆ ಸ್ಥಳೀಯರ ಸಹಭಾಗಿತ್ವ ಅಗತ್ಯ : ಅರಿಹಂತ ಬಿರಾದಾರಪಾಟೀಲ

Spread the loveಶೈಕ್ಷಣಿಕ ಅಭಿವೃದ್ಧಿಗೆ ಸ್ಥಳೀಯರ ಸಹಭಾಗಿತ್ವ ಅಗತ್ಯ : ಅರಿಹಂತ ಬಿರಾದಾರಪಾಟೀಲ ಬೆಟಗೇರಿ:ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಸಮಗ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ