Breaking News
Home / ಬೆಳಗಾವಿ / ಶಿಕ್ಷಕ ಶಿವರಾಜ ಕಾಂಬಳೆ ಅವರಿಗೆ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

ಶಿಕ್ಷಕ ಶಿವರಾಜ ಕಾಂಬಳೆ ಅವರಿಗೆ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

Spread the love

ಮೂಡಲಗಿ: ತಾಲ್ಲೂಕಿನ ಧರ್ಮಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕ ಶಿವರಾಜ ಕಾಂಬಳೆ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಧಾರವಾಡ ಕೊಡಮಾಡುವ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಭವನದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಶಿಕ್ಷಕ ಶಿವರಾಜ ಪ್ರತಿ ಬೇಸಿಗೆ ರಜೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜನೆ ಮಾಡುತ್ತಾರೆ. ಕವಿಯೂ ಆಗಿರುವ ಶಿಕ್ಷಕ ಶಿವರಾಜ ಕಾಂಬಳೆ ನಮ್ಮವ್ವ ಕವನ ಸಂಕಲನವನ್ನು ಪ್ರಕಟಿಸಿದ್ದಾರೆ.


Spread the love

About inmudalgi

Check Also

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ