Breaking News
Home / ತಾಲ್ಲೂಕು / ರವಿವಾರದ ಸಂತೆಯನ್ನು ಸಂಪೂರ್ಣ ರದ್ದು- ಈಶ್ವರ ಬಳಿಗಾರ

ರವಿವಾರದ ಸಂತೆಯನ್ನು ಸಂಪೂರ್ಣ ರದ್ದು- ಈಶ್ವರ ಬಳಿಗಾರ

Spread the love

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಡೆಯುತ್ತಿದ್ದ ಭಾನುವಾರದ ಸಂತೆಯನ್ನು ಕರೋನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಆ.2, ಆ.9, ಆ.16, ಆ.23, ಆ30ರ ದಿನಗಳ ರವಿವಾರದ ಸಂತೆಯನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸಹಕರಿಸಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ತಿಳಿಸಿದ್ದಾರೆ.
ಶನಿವಾರ ಆ.1 ರಂದು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಬೆಟಗೇರಿ ಗ್ರಾಮದ ಹಿರಿಯ ನಾಗರಿಕರ ಮಾರ್ಗದರ್ಶನದಂತೆ ಸರ್ಕಾರ ಲಾಕ್‍ಡೌನ್ ತೆರವುಗೊಳಿಸಿದರೂ ಕರೊನಾ ಸೋಂಕು ಹರಡುವಿಕೆ ಇನ್ನೂ ಸಂಪೂರ್ಣ ನಿಯಂತ್ರಣದಲ್ಲಿ ಇಲ್ಲದ ಕಾರಣ ಇನ್ನೂ ಒಂದು (ಆಗಸ್ಟ್) ತಿಂಗಳು ಪೂರ್ಣ ಅವಧಿ ತನಕ ರವಿವಾರದ ಸಂತೆ ಬರುವ ಅಂಗಡಿ-ಮುಂಗಟ್ಟುಗಾರರು ಮತ್ತು ರೈತರು ಗ್ರಾಮದಲ್ಲಿರುವ ಮನೆ ಮನೆಗೆ ಹೋಗಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ಪ್ರೇರಿತರಾಗಿ ಸ್ಥಳೀಯರು ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ಮನವಿ ಮಾಡಿಕೊಂಡಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ