Breaking News
Home / ತಾಲ್ಲೂಕು / *ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್*

*ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್*

Spread the love

ದಿನಾಂಕ 05.08.2020 ರಂದು ಅಯೋಧ್ಯಾ ಶ್ರೀ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮವನ್ನು ಶ್ರೀ ನರೇಂದ್ರ ಮೋದಿ , ಸನ್ಮಾನ್ಯ ಪ್ರಧಾನ ಮಂತ್ರಿಗಳು , ಭಾರತ ಸರ್ಕಾರ ರವರು ನೆರವೇರಿಸಲಿದ್ದು , ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಅವಶ್ಯಕತೆ ಇರುವುದರಿಂದ ಸದರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ( ಬೆಳಗಾವಿ ತಾಲೂಕು ಹೊರತುಪಡಿಸಿ ) ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ( ಬೆಳಗಾವಿ ತಾಲೂಕು ಹೊರತುಪಡಿಸಿ ) ದಿನಾಂಕ 04.08.2020 ರ ಸಾಯಂಕಾಲ 06:00 ಗಂಟೆಯಿಂದ ದಿನಾಂಕ 05.08.2020 ರ ಮಧ್ಯರಾತ್ರಿ 12:00 ಗಂಟೆಯವರೆಗೆ ಎಲ್ಲ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಒಫಿಸತಕ್ಕದ್ದು ಎಂದು ಆದೇಶಿಸಿದ್ದಾರೆ.


Spread the love

About inmudalgi

Check Also

ಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರು ಸಹಕರಿಸಿ: ಶಿವಲಿಂಗ ಸ್ವಾಮೀಜಿ

Spread the loveಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರು ಸಹಕರಿಸಿ: ಶಿವಲಿಂಗ ಸ್ವಾಮೀಜಿ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ