Breaking News
Home / ತಾಲ್ಲೂಕು / ದಿ.ಸುರೇಶ ಅಂಗಡಿ ಅವರಿಗೆ ಕುಲಗೋಡ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಶೃದ್ಧಾಂಜಲಿ

ದಿ.ಸುರೇಶ ಅಂಗಡಿ ಅವರಿಗೆ ಕುಲಗೋಡ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಶೃದ್ಧಾಂಜಲಿ

Spread the love

ದಿ.ಸುರೇಶ ಅಂಗಡಿ ಅವರಿಗೆ ಕುಲಗೋಡ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಶೃದ್ಧಾಂಜಲಿ

ಕುಲಗೋಡ: ಬುಧವಾರದಂದು ನಿಧನರಾದ ಕೇಂದ್ರ ರೈಲ್ವೇ ಸಚಿವ ಸುರೇಶ ಅಂಗಡಿ ಅವರಿಗೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ತಮ್ಮಣ್ಣಾ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು,ಅಭಿಮಾನಿಗಳಿಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಮೌನ ಆಚರಿಸಿ ಶೃದ್ಧಾಂಜಲಿ ಸಲ್ಲಿಸಿದರು,
ಜಿಪಂ ಸದಸ್ಯ ಗೋವಿಂದ ಕೊಪ್ಪದ ಮಾತನಾಡಿ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ರೈಲ್ವೇ ಸಚಿವರಾಗಿ ಕರ್ನಾಟಕಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಸಾಕಷ್ಟು ಮಹಾತ್ವಾಕಾಂಕ್ಷೆ ಹೊಂದಿದ್ದ ಅವರು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು. ಅವರ ನಿಧನದಿಂದ ಇಡೀ ದೇಶಕ್ಕೆ ನಷ್ಟವಾಗಿದೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ಅಂಗಡಿ ಅವರು, 4 ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ಕೊರೋನಾ ಮಹಾಮಾರಿಗೆ ಬಲಿಯಾಗಿರುವುದು ನಮ್ಮೆಲ್ಲರ ದುರ್ದೈವವೆಂದು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ಅರಭಾವಿ ಮಂಡಲ ತಮ್ಮಣ್ಣಾ ದೇವರ. ಸುಭಾಸ ವಂಟಗೋಡಿ. ಭೀಮಶಿ ದಾಸರಡ್ಡಿ. ಭೀಮಶಿ ಸೋಮಕ್ಕನವರ. ವೆಂಕಣ್ಣಾ ಮಚಕನೂರ. ಸೋಮಲಿಂಗ ಮಿಕಲಿ. ಶಂಕರ ದೇವರ. ರುದ್ರಪ್ಪ ಲಕ್ಷ್ಮೇಶ್ವರ. ಪಾಂಡು ದಾಸರ. ಬಸು ಬಿಲಕುಂದಿ. ಹಣಮಂತ ಯರಗಟ್ಟಿ. ಹಾಗೂ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು.

 


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ