Breaking News
Home / Recent Posts / ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

Spread the love

ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ

ಮೂಡಲಗಿ: ಇಲ್ಲಿಯ ಕೃಷಿ ಉತ್ಪನ ಮಾರುಕಟ್ಟೆ ಆವರಣದಲ್ಲಿ 2020-21ನೇ ಸಾಲಿನ ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಸೂಮಾರು 40 ಲಕ್ಷ ರೂಗಳ ಅನುದಾನದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮತ್ತು ಎಪಿಎಂಸಿ ಉಪಾಧ್ಯಕ್ಷ ಕೆ.ಕೆ.ಸಂಕ್ರೆಪ್ಪಗೋಳ ಭೂಮಿ ಪೂಜೆ ನೆರೆವೇರಿಸಿದರು.
ಭೂಮಿ ಪೂಜೆ ನೆರವೇರಿಸಿದ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮಾತನಾಡಿ, ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಮತ್ತು ವಿಷೇಶ ಕಾಳಜೀಯಿಂದ ಜನ ಸಮಾನ್ಯರಿಗೆ ಮತ್ತು ರೈತರಿಗೆ ಅನುಕೂಲಕ್ಕಾಗಿ ಅಥಿತಿ ಗೃಹವನ್ನು ನಿರ್ಮಿಸಲಾಗುತ್ತಿದೆ ಎಂದರು.

ಈ ಸಂಧರ್ಭದಲ್ಲಿ ಎಪಿಎಂಸಿ ನಿರ್ದೇಶಕರಾದ ಶಿವುದುಂಡು ಕೊಂಗಾಲಿ, ಮಾರುತಿ, ಹರಿಜನ, ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಮೂಡಲಗಿ ಪುರಸಭೆ ಮಾಜಿ ಉಪಾಧ್ಯಕ್ಷ ರವೀಂದ್ರ ಸೋನವಾಲ್ಕ, ನಿಂಗಪ್ಪ ಪಿರೋಜಿ, ಪುರಸಭೆ ಸದಸ್ಯ ಜಯಾನಂದ ಪಾಟೀಲ, ಎಪಿಎಂಸಿ ಕಾರ್ಯದರ್ಶಿ ಬಿ.ಆರ್.ಜಾಲಿಬೇರಿ, ಆರ್.ಎಮ್.ದೊಡಮನ್ನಿ, ಗುತ್ತಿಗೇದಾರ ಆರ್.ಎನ್.ಮುಶೆನ್ನವರ ಮತ್ತಿತರರು ಇದ್ದರು.


Spread the love

About inmudalgi

Check Also

‘ಬಸವೇಶ್ವರ ಕೋ.ಅಪ್ ಕ್ರೆಡಿಟ್ ಸೊಸೈಟಿಗೆ ರೂ.5.05 ಕೋಟಿ ಲಾಭ’- ಮಲ್ಲಿಕಾರ್ಜುನ ಢವಳೇಶ್ವರ

Spread the loveಮೂಡಲಗಿ: ‘ಮೂಡಲಗಿಯ ಬಸವೇಶ್ವರ ಅರ್ಬನ್ ಕೋ.ಅಪ್ ಕ್ರೆಡಿಟ್ ಸೊಸಾಯಿಟಿಯು 2024-25 ಆರ್ಥಿಕ ವರ್ಷದ ಕೊನೆಯಲ್ಲಿ ರೂ.5.05 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ