Breaking News
Home / Recent Posts / ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಸೋಮವಾರ.25 ರಂದು ನಡೆಯಿತು.
ಮೂಡಲಗಿ ಕೇಂದ್ರದ ಶ್ರೀಕ್ಷೇಧಗ್ರಾಯೋ ಬಿಸಿ ಟ್ರಸ್ಟ್ ಯೋಜನಾಧಿಕಾರಿ ದೇವರಾಜ್ ಎಂ., ಜಿಲ್ಲಾ ಎನ್.ಆರ್.ಎಲ್.ಎಂ ಸಮನ್ವಯ ಅಧಿಕಾರಿ ಸತೀಶ್ ಎಸ್. ಅವರು ಶ್ರೀಕ್ಷೇಧಗ್ರಾ ವಿವಿಧ ಯೋಜನೆಗಳಿಂದ ದೊರಕುವ ಸಹಾಯ, ಸೌಲಭ್ಯಗಳ ಕುರಿತು ಹಾಗೂ ಒಕ್ಕೂಟ ಪದಾಧಿಕಾರಿಗಳ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಮಾಹಿತಿ ನೀಡಿದರು.
ಶ್ರೀಕ್ಷೇಧಗ್ರಾಯೋ ಕೌಜಲಗಿ ವಲಯದ ಮೇಲ್ವಿಚಾರಕ ಬಾಬುರಾವ್ ಗೋಣಿ, ಮಧು ತಲ್ಲೂರ, ಬಸವರಾಜ ಕರಿಗಾರ ಸೇರಿದಂತೆ ಕೌಜಲಗಿ ವಲಯ ವ್ಯಾಪ್ತಿಯ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಮಹಿಳಾ ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು, ಸದಸ್ಯರು, ಸೇವಾ ಪ್ರತಿನಿಧಿಗಳು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ