Breaking News
Home / ತಾಲ್ಲೂಕು / ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ

ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ

Spread the love

ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’  ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ

ಮೂಡಲಗಿ: ‘ಕೊರೊನಾ ಸೋಂಕು ಹರಡದಂತೆ ಸಮಾಜದ ಎಲ್ಲ ಜನರು ಬದ್ದರಾಗಿರಬೇಕು. ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಶ್ಲಾಘನೀಯವಾಗಿದೆ.
ಆಶಾ ಕಾರ್ಯಕರ್ತರು ತಮ್ಮ ವಯಕ್ತಿಕ ಕೆಲಸಗಳನ್ನು ಬಿಟ್ಟು, ಜೀವ ಫಣಕಿಟ್ಟು ದೇಶ ಸೇವೆಗಾಗಿ ಕಟಿಬದ್ಧರಾಗಿ ನಿಂತಿರುವುದು ದೇಶವೇ ಹೆಮ್ಮೆ ಪಡುವಂತಾಗಿದೆ ಎಂದರು.
ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯುವುದು, ಪಡಿತರ ವಿತರಣೆ, ಜನರ ಆರೋಗ್ಯ ಪರೀಕ್ಷೆ ಮತ್ತು ಕ್ವಾರಂಟೈನ್ ವ್ಯವಸ್ಥೆ ಮಾಡುವುದರಲ್ಲಿ ತಾಲ್ಲೂಕು ಆಡಳಿತದ ಕಾರ್ಯವು ಶ್ಲಾಘನೀಯವಾಗಿದೆ ಎಂದರು.
ಕೊರೊನಾ ಹೋರಾಟದಲ್ಲಿ ಮಾಧ್ಯಮದವರ ಕೆಲಸವು ಪ್ರಮುಖವಾಗಿದೆ. ಸರ್ಕಾರವು ಅವರ ಸಹಾಯಕ್ಕೆ ಬರಬೇಕಾಗಿದೆ. ಮಾಧ್ಯಮದವರಿಗೂ ವಿಶೇಷ ಆರ್ಥಿಕ ಸಹಾಯ ದೊರಕುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ಡಿ.ಜಿ. ಮಹಾತ್, ಸಿಪಿಐ ವೆಂಕಟೇಶ ಮುರನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ, ಮುಖ್ಯಾಧಿಕಾರಿ ದೀಪಕ ಹರ್ದಿ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಸಿಡಿಪಿಒ ವೈ.ಎಂ. ಗುಜನಟ್ಟಿ, ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ, ಎಚ್.ಎಲ್. ಬಾಲದಂಡಿ ಮತ್ತಿತರರು ಇದ್ದರು.

ವರದಿ: ಕೆ.ವಾಯ್ ಮೀಶಿ


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ